Adv
Saturday 29 October 2022
Sunday 16 October 2022
ಸಂಪತ್ತಿಗಿಂತ ಉತ್ತಮ ಆರೋಗ್ಯವೇ ಬಹು ದೊಡ್ಡ ಆಸ್ತಿ : ಸಚಿವ ಹೆಬ್ಬಾರ್
ಯಲ್ಲಾಪುರ : ಯಾವುದೇ ವ್ಯಕ್ತಿಗೆ ಸಂಪತ್ತಿಗಿಂತ ಉತ್ತಮ ಆರೋಗ್ಯವೇ ಬಹು ದೊಡ್ಡ ಆಸ್ತಿ. ಜೀವನದಲ್ಲಿ ಪರಿಪೂರ್ಣ ಆರೋಗ್ಯ ಗಳಿಸಿ, ಉಳಿಸಿಕೊಳ್ಳುವುದು ಅತಿ ಮಹತ್ವವಾದುದು, ಇಂತಹ ಶಿಬಿರಗಳ ಮೂಲಕ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಅವರು ಅಕ್ಟೋಬರ್.15 ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್, ಸಿದ್ದಾಪುರದ ಆಯುರ್ವೇದ ಮಹಾವಿದ್ಯಾಲಯ ಹಾಗೂ ತಾಲೂಕಾ ಆಸ್ಪತ್ರೆಗಳ ಸಹಯೋಗದಲ್ಲಿ ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ರೋಗಕ್ಕೆ ಚಿಕಿತ್ಸೆ ಒಂದು ವಿಧಾನವಾಗಿರುವಂತೆ, ರೋಗವೇ ಬಾರದಂತೆ ತಡೆಯುವುದು ಇನ್ನೊಂದು ಕ್ರಮವಾಗಿದೆ. ಎಲ್ಲರೂ ರೋಗ ಬಾರದಂತೆ ಮುಂಜಾಗ್ರತೆ ವಹಿಸಿದರೆ ಆರೋಗ್ಯವಂತರಾಗಿ ಬದುಕಬಹುದು ಎಂದರು.
ಸಿದ್ದಾಪುರ ಧನ್ವಂತರಿ, ಆರ್ಯುವೇದ ಕಾಲೇಜು ಪ್ರಾಚಾರ್ಯೆ ಡಾ.ರೂಪಾ ಭಟ್ಟ ಮಾತನಾಡಿ, ಊಟ ಮಾಡುವುದು ಜೀವನಕ್ಕಾಗಿ, ನಾವೇನನ್ನಾದರೂ ಗಳಿಸಿದರೆ ಉತ್ತಮ ಆರೋಗ್ಯ ಸಿದ್ದಿಸಬೇಕು. ಆಯುರ್ವೇದ ಜೀವನ ಚಿಕಿತ್ಸಾ ಪದ್ದತಿ. ರೋಗ ಬಾರದಂತೆ ನೋಡಿಕೊಳ್ಳುವ ರೂಢಿ ಅಳವಡಿಸಿಕೊಳ್ಳಬೇಕು. ನಮ್ಮ ದೈನಂದಿನ ಜೀವನ ಪದ್ದತಿಯನ್ನು ಹಿಂದಿನವರಂತೆ ಬದಲಾಯಿಸಿಕೊಳ್ಳಬೇಕಾಗಿದೆ. ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ವಿದೇಶಿಯರು ಆಯುರ್ವೇದದ ಮೊರೆ ಹೋಗುತ್ತಿದ್ದಾರೆ, ಆದರೆ ನಮ್ಮವರು ಆಯುರ್ವೇದದಿಂದ ದೂರವಾಗುತ್ತಿದ್ದಾರೆ. ಆಯುರ್ವೇದದಲ್ಲಿ ದುಷ್ಪರಿಣಾಮವಿಲ್ಲ ಎಂದು ಹೇಳಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ ಮಾತನಾಡಿ, ಆಯುರ್ವೇದದಲ್ಲಿ ಅನೇಕ ರೀತಿಯ ಚಿಕಿತ್ಸೆ ನೀಡಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ ಮಾತನಾಡಿದರು.
ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಪ.ಪಂ ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ, ಕೆ.ಜೆ.ಯು ರಾಜ್ಯ ಕಾರ್ಯಕಾರಿಣಿ ಸದಸ್ಯ ನಾಗರಾಜ ಮದ್ಗುಣಿ, ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ ಮತ್ತಿತರರು ಉಪಸ್ಥಿತರಿದ್ದರು.
ಧನ್ವಂತರಿ ಕಾಲೇಜಿನ ವೈದ್ಯರಾದ ಡಾ.ರೂಪಾ ಭಟ್ಟ, ಡಾ.ಮಧುಕೇಶ್ವರ ಹೆಗಡೆ, ಡಾ. ಚೈತ್ರಿಕಾ ಹೊಸೂರು, ಯಲ್ಲಾಪುರದ ಆಯುಶ್ ವೈದ್ಯರಾದ ಡಾ. ಕೇಶವ್ರಾಜ್ ವಿ.ವಿ., ಆಶಾ ಪಾಟೀಲ್ 84 ಕ್ಕೂ ಹೆಚ್ಚು ಜನರಿಗೆ ತಪಾಸಣೆ, ಚಿಕಿತ್ಸೆ ನೀಡಿದರು.
ತಾಲೂಕಾ ಆಸ್ಪತ್ರೆಯ ವೈದ್ಯರಾದ ಡಾ. ಸೌಮ್ಯ ಕೆ.ವಿ ಸ್ವಾಗತಿಸಿದರು. ಪತ್ರಕರ್ತ ಕೇಬಲ್ ನಾಗೇಶ ನಿರ್ವಹಿಸಿ, ವಂದಿಸಿದರು.
Saturday 15 October 2022
Friday 14 October 2022
Thursday 13 October 2022
ಗಾಯಕ ಎ.ಕೆ. ಗುರುದತ್ತ ಅವರಿಂದ ಸಂಗೀತ ಕಾರ್ಯಕ್ರಮ
Wednesday 12 October 2022
ಆರ್ಥಿಕ ಲಾಭಕ್ಕಾಗಿ ಕೆರಳದಲ್ಲಿ ಮಾಟಮಂತ್ರ ಇಬ್ಬರು ಮಹಿಳೆಯರ ನರಬಲಿ
ಅ. 15 ರಂದು ಉಚಿತ, ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ
Tuesday 11 October 2022
ಸಚಿವ ಶಿವರಾಮ ಹೆಬ್ಬಾರ್ ರಿಂದ ದಾಂಡೇಲಿ ಹಾಗೂ ಮುಂಡಗೋಡದಲ್ಲಿ ವಿವಿಧ ಕಾರ್ಯಕ್ರಮ ಉದ್ಘಾಟನೆ
ಈಶ್ವರ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಹಾಗೂ ಅನ್ನ ಸಂತರ್ಪಣೆ
ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮಾನಸಿಕ ಆರೋಗ್ಯ ದಿನ : ನ್ಯಾ. ಲಕ್ಷ್ಮೀಬಾಯಿ ಪಾಟೀಲ್
ಉದ್ದೇಶಿತ ಸಿಟಿ ಬಸ್ ನಿಲ್ದಾಣ ಸ್ಥಳಕ್ಕೆ ಸಚಿವ ಹೆಬ್ಬಾರ್ ಭೇಟಿ ಪರಿಶೀಲನೆ
ವಿಶ್ವದರ್ಶನ ಪದವಿ ಪೂರ್ವ ಕಾಲೇಜಿನಲ್ಲಿ ವನ್ಯ ಜೀವ ಸಪ್ತಾಹ ಅಂಗವಾಗಿ ಚಿತ್ರಕಲಾ ಸ್ಪರ್ಧೆ
ಯಲ್ಲಾಪುರ: ಕರ್ನಾಟಕ ಸರಕಾರ, ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ಯಲ್ಲಾಪುರದ
ಅರಣ್ಯ ಇಲಾಖೆಯು 68ನೇ ವನ್ಯ ಜೀವ ಸಪ್ತಾಹ_ 2022ರ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿತ್ತು.
ಈ ಸ್ಪರ್ಧೆಯಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆಯನ್ನು ಯಲ್ಲಾಪುರದ ಎ ಪಿ ಎಂ ಸಿ ಎದುರಿನ ಟ್ರೀ ಪಾರ್ಕ್ ನಲ್ಲಿ ಆಯೋಜಿಸಲಾಗಿತ್ತು. ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ
ಪ್ರಣವ್ ವಿಶ್ವನಾಥ್ ಭಟ್ ಪ್ರಥಮ ಸ್ಥಾನ, ಪವಿತ್ರ ಭಟ್ ದ್ವಿತೀಯ ಸ್ಥಾನ ಹಾಗೂ ಸಾಕ್ಷಿ ಖಾನಾಪುರ್ ತೃತೀಯ ಸ್ಥಾನವನ್ನು ಪಡದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಡಿ.ಆರ್.ಎಫ್. ಓ ಸಂಜಯಕುಮಾರ ಹಾಗೂ ಅರಣ್ಯ ರಕ್ಷಕ ಕಾಶೀನಾಥ ಯಾಕಂಚಿ ಇದ್ದರು. ಸಂಸ್ಥೆಯ ಪರವಾಗಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ.ದತ್ತಾತ್ರೇಯ ಗಾಂವ್ಕರ್, ಉಪನ್ಯಾಸಕಿ ವಂದನಾ ಗುಮ್ಮಾನಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅದ್ಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಸೇರಿದಂತೆ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.