ಯಲ್ಲಾಪುರ: ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಷಾಢ ಏಕಾದಶಿಯ ಪ್ರಯುಕ್ತ ಜುಲೈ 17 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 9.30 ಕ್ಕೆ ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು, ಮಧ್ಯಾಹ್ನ 2 ಕ್ಕೆ ಗೀತಾಜ್ಞಾನ ಯಜ್ಞ ಕಾರ್ಯಕ್ರಮವು ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮಾತೆಯರು ಭಗವದ್ಗೀತೆಯ 18 ಅಧ್ಯಾಯಗಳ ಪಾರಾಯಣ ಮಾಡಲಿದ್ದಾರೆ ಎಂದು ದೇವಸ್ಥಾನ ಸಮಿತಿಯ ಪ್ರಮುಖರು ತಿಳಿಸಿದ್ದಾರೆ.