Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Friday, 16 August 2024

ಕೊಲ್ಕತ್ತಾ ವೈದ್ಯೆಯ ಕೊಲೆ ಖಂಡಿಸಿ ನಾಳೆ ಯಲ್ಲಾಪುರದಲ್ಲಿ ವೈದ್ಯರ ಪ್ರತಿಭಟನೆ

ಯಲ್ಲಾಪುರ: ಕೋಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಘಟನೆಗೆ ಉತ್ತರಕನ್ನಡದ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಮಾನವೀಯ ಘಟನೆಯನ್ನು ಖಂಡಿಸಲು, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವೈದ್ಯರು ಆಗಸ್ಟ್ 17 ರಂದು ರಾಜ್ಯಾದ್ಯಾಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. 
   ಉತ್ತರಕನ್ನಡ ಜಿಲ್ಲೆಯ ವೈದ್ಯರೂ ಈ ಪ್ರತಿಭಟನೆಗೆ ಬೆಂಬಲ ಸೂಚಿಸಲಿದ್ದು, ತುರ್ತು ಸೇವೆಗಳನ್ನು ಹೊರತುಪಡಿಸಿ ಇತರೆ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಸಂಘದ ಅಧ್ಯಕ್ಷ ಡಾ. ನರೇಂದ್ರ ಪವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
   ಈ ಕೊಲೆ ಘಟನೆ ವೈದ್ಯ ಸಮುದಾಯದ ಮನೋಸ್ಥಿತಿಗೆ ದೊಡ್ಡ ಆಘಾತ ತಂದಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಭದ್ರತೆ ಒದಗಿಸುವ ಅಗತ್ಯವಿದೆ ಎಂದು ವೈದ್ಯರು ಒತ್ತಾಯಿಸಿದ್ದಾರೆ.