Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Friday, 16 August 2024

ವಜ್ರಳ್ಳಿಯಲ್ಲಿ ಪ್ರೌಢಶಾಲಾ ವಲಯ ಮಟ್ಟದ ಕ್ರೀಡಾಕೂಟ: ಕ್ರೀಡೆಗೆ ಪ್ರೋತ್ಸಾಹ

ಯಲ್ಲಾಪುರ: ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಲಯ ಮಟ್ಟದ   ಇಲಾಖಾ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು. 
   ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ. ಕ್ರೀಡೆಯ ಮಹತ್ವವನ್ನು ವಿವರಿಸಿ, "ಕ್ರೀಡೆ ನಮ್ಮ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ದೈಹಿಕ ಶ್ರಮವು ವ್ಯಕ್ತಿಯನ್ನು ಶಕ್ತಿಶಾಲಿಯಾಗಿಸುತ್ತದೆ" ಎಂದು ಹೇಳಿದರು.
   ಗ್ರಾಮ ಪಂಚಾಯಿತಿ ಅಧ್ಯಕ್ಷ ಭಗೀರಥ ನಾಯ್ಕ ಕ್ರೀಡಾ ಜ್ಯೋತಿ ಬೆಳಗಿಸಿ, "ಕ್ರೀಡಾಕೂಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಮತ್ತು ಆರೋಗ್ಯವನ್ನು ಉತ್ತೇಜಿಸಲು ಸಹಕಾರಿಯಾಗಲಿದೆ" ಎಂದು ಹೇಳಿದರು. 
    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸರ್ವೋದಯ ಶಿಕ್ಷಣ ಸಮಿತಿಯ ಸದಸ್ಯ ಅಪ್ಪಣ್ಣ ಭಟ್ಟ ಬೆಣ್ಣೆಜಡ್ಡಿ, "ಕ್ರೀಡೆಯು ಗ್ರಾಮೀಣ ಭಾಗದಲ್ಲಿ ನಶಿಸುತ್ತಿರುವುದನ್ನು ವಿಷಾದಕರ" ಎಂದು ಅಭಿಪ್ರಾಯಪಟ್ಟರು. 
   ಅತಿಥಿಗಳಾದ ದೈಹಿಕ ಶಿಕ್ಷಣ ಪರಿವೀಕ್ಷಕ ಎಂ ಎನ್ ತಾರೀಕೊಪ್ಪ, ಸರ್ವೋದಯ ಸಂಸ್ಥೆಯ ಉಪಾಧ್ಯಕ್ಷ ಟಿ ಸಿ ಗಾಂವ್ಕರ್, ಮತ್ತು ಹಿರಿಯರಾದ ಜಿ ಎನ್. ಕೋಮಾರ ಉಪಸ್ಥಿತರಿದ್ದರು. 
   ಶಿಕ್ಷಕ ಎಸ್ ಟಿ ಬೇವಿನಕಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಕ ವಿನೋದ ಗಾಯನ್ನನವರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಚಿದಾನಂದ ಹಳ್ಳಿ ನಿರೂಪಿಸಿದರು. ಗಿರೀಶ್ ಹೆಬ್ಬಾರ್ ವಂದಿಸಿದರು.