Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Sunday, 11 August 2024

ಯಲ್ಲಾಪುರದ ಸೇಜಲ್ ನಾಯ್ಕ ಭಾಗವಹಿಸಿದ್ದ ಕರ್ನಾಟಕ ಸ್ಕೆಟಿಂಗ್ ತಂಡಕ್ಕೆ ರಜತ ಪದಕ; ಜಿಲ್ಲೆಗೆ ಹೆಮ್ಮೆ


ಯಲ್ಲಾಪುರ: ತಮಿಳುನಾಡಿನ ಕೊಯಮತ್ತೂರಿನಲ್ಲಿ ಆಗಸ್ಟ್ 7 ರಿಂದ 11ರವರೆಗೆ ನಡೆದ ಇಂಡಿಯಾ ಸ್ಕೆಟ್ ಗೇಮ್ಸ್ 2024-ಚಾಂಪಿಯನ್‌ಶಿಪ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಮೂವರು ಸ್ಕೇಟರ್ಸ್ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಗೌರವ ತಂದಿದ್ದಾರೆ.
   ಯಲ್ಲಾಪುರ ತಾಲೂಕಿನ ವೈಟಿಎಸ್‌ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೇಜಲ್ ಸತೀಶ ನಾಯ್ಕ, ಕರ್ನಾಟಕ ರಾಜ್ಯ ಸಿನಿಯರ್ ಮಹಿಳಾ ಡರ್ಬಿ ತಂಡವನ್ನು ಪ್ರತಿನಿಧಿಸಿ ರಜತ ಪದಕ ಪಡೆದಿದ್ದಾರೆ. ಸೇಜಲ್ ನಾಯ್ಕ ಪ.ಪಂ. ಸದಸ್ಯ ಸತೀಶ್ ನಾಯ್ಕ ಅವರ ಪುತ್ರಿಯಾಗಿದ್ದು, ಈ ಹಿಂದೆಯೂ ರಾಷ್ಟ್ರಮಟ್ಟದ ಸ್ಕೇಟಿಂಗ್‌ನಲ್ಲಿ ಭಾಗವಹಿಸಿ ಪದಕ ಗಳಿಸಿದ್ದಳು.
   ಈಕೆಯೊಂದಿಗೆ ಶಿರಸಿಯ ಎಮ್ಈಎಸ್ ಕಾಲೇಜಿನ ಅನಘಾ ರಮೇಶ್ ಹೆಗಡೆ, ದಾಂಡೇಲಿಯ ಸಾನಿಕಾ ಉಮೇಶ್ ತೊರತ್ ತಂಡದಲ್ಲಿದ್ದು, ಪದಕಕ್ಕೆ ಭಾಜನರಾಗಿದ್ದಾರೆ. 
  ಕೈಗಾ ರೊಲರ್ ಸ್ಕೇಟಿಂಗ್ ಕ್ಲಬ್‌ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ತರಬೇತಿಯನ್ನು ಪಡೆಯುತ್ತಿರುವ ಈ ಮೂವರು, ಸತತ ನಾಲ್ಕನೇ ಬಾರಿ ಕರ್ನಾಟಕ ತಂಡದ ಪರವಾಗಿ ಆಡಿದ್ದಾರೆ. ತರಬೇತುದಾರ ದೀಲಿಪ್ ಹಣಬರ್ ಹಾಗೂ ಸಹಾಯಕ ತರಬೇತುದಾರ ಮಂಜಪ್ಪ ನಾಯ್ಕ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಸಾಧ್ಯವಾಗಿದೆ.
   ಸೇಜಲ್ ಸತೀಶ್ ನಾಯ್ಕ ಅವರ ಸಾಧನೆಗೆ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಹಿರಿಯ ಕ್ರೀಡಾಪಟುಗಳು, ಜನಪ್ರತಿನಿಧಿಗಳು ಹಾಗೂ ಊರ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.