Adv

news21 ‌ ‌YELLAPURNews prakatane --------- ‌ kumar Oct9to15 ‌ ‌ ‌ ‌ IMG-20241009-195526

Thursday, 5 September 2024

ಸೆ.5 ಇಂದು ಶಿಕ್ಷಕರ ದಿನಾಚರಣೆ : ಗುರು ಗೌರವ, ಪ್ರಶಸ್ತಿ ಪ್ರದಾನ ಮತ್ತು ನಿವೃತ್ತಿ ಸನ್ಮಾನ


ಯಲ್ಲಾಪುರ : ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 5 ಇಂದು ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣಾ ಸಮಾರಂಭ ನಡೆಯಲಿದೆ. 




ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಅಂಕೋಲಾ ಅರ್ಬನ್ ಕೋ-ಆಪ್ ಬ್ಯಾಂಕ್ ಲಿ, ಶಾಖೆ ಯಲ್ಲಾಪುರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು  ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 

   ಮುಖ್ಯ ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ತಿನ ಶಾಸಕ ಶಾಂತಾರಾಮ ಸಿದ್ದಿ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಮತ್ತು ಯೋಜನಾ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪಟ್ಟಣ ಪಂಚಾಯತಿಯ ಅಧ್ಯಕ್ಷೆ ನರ್ಮದಾ ರವಿ ನಾಯ್ಕ ಹಾಗೂ ಉಪಾಧ್ಯಕ್ಷ ಅಮಿತ್ ಅಂಗಡಿ ಭಾಗವಹಿಸಲಿದ್ದಾರೆ.

   ಕಾರ್ಯಕ್ರಮಕ್ಕೆ ಅಂಕೋಲಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ್ ನಾರ್ವೇಕರ, ತಾ.ಪಂ. ಆಡಳಿತಾಧಿಕಾರಿ ನಟರಾಜ ಟಿ.ಎಚ್, ಪ.ಪಂ ಮುಖ್ಯಾಧಿಕಾರಿ ಸುನಿಲ್ ಗಾವಡೆ, ಜಿ..ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ನಾರಾಯಣ ನಾಯಕ, ಜಿ.ಪ್ರೌ.ಶಾ.ಸ.ಶಿ.ಸಂಘದ ಅಧ್ಯಕ್ಷ ಅಜಯ ನಾಯಕ, ಜಿ.ಪ್ರೌ.ಶಾ.ದೈ.ಶಿ.ಸಂಘದ ಅಧ್ಯಕ್ಷ ನಾರಾಯಣ ನಾಯಕ, ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ ವಿಶೇಷ ಅವ್ವಾನಿತರಾಗಿದ್ದಾರೆ ಎಂದು ತಾಲೂಕ ದಂಡಾಧಿಕಾರಿ ಅಶೋಕ ಭಟ್  ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ ವಿಶೇಷ ಆಹ್ವಾನಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.