ಯಲ್ಲಾಪುರ: ಶಾಸಕರಾದ ಶಿವರಾಮ ಹೆಬ್ಬಾರ್ ಅವರು ರವಿವಾರ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಸ್ಥಳೀಯ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾದ ಶ್ರೀ ಗಣಪತಿ ಮೂರ್ತಿಗಳ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಶಾಸಕರು ಮೊದಲು ಪಟ್ಟಣದ ತಿಲಕ ಚೌಕ್ನಲ್ಲಿರುವ ಗಣೇಶ ಮೂರ್ತಿಯನ್ನು ದರ್ಶನ ಪಡೆದರು. ನಂತರ ದೇವಿ ಮೈದಾನ, ಕಾಳಮ್ಮನಗರ, ಉದ್ಯಮ ನಗರ, ಬಾಳಗಿಮನೆ ಹಾಗೂ ತಟಗಾರ್ ಕ್ರಾಸ್ ನಲ್ಲಿರುವ ಗಣೇಶ ಮೂರ್ತಿಗಳನ್ನು ಭೇಟಿ ಮಾಡಿ, ಪೂಜೆ ಸಲ್ಲಿಸಿ, ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು.
ಗಣೇಶೋತ್ಸವದ ಅವಧಿಯಲ್ಲಿ ಶಾಸಕರು ಕ್ಷೇತ್ರದ ವಿವಿಧ ಭಾಗಗಳಲ್ಲಿರುವ ಗಣೇಶ ಮೂರ್ತಿಗಳನ್ನು ಪೂಜೆ ಸಲ್ಲಿಸಿದ ನಂತರ, ಅಲ್ಲಿಯ ಜನರೊಂದಿಗೆ ಸಂವಾದ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದರು
ಶಿವರಾಮ ಹೆಬ್ಬಾರ್ ಅವರು ರವಿವಾರ ಪಟ್ಟಣದ ನೂತನ ನಗರದಲ್ಲಿ ಸ್ಥಳೀಯ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಿರುವ ಶ್ರೀ ಗಣಪತಿ ಮೂರ್ತಿಯ ದರ್ಶನವನ್ನು ಪಡೆದರು.
ನಂತರದ ಗಜಾನನೋತ್ಸವ ಸಮಿತಿಯ ವತಿಯಿಂದ ಆಯೋಜಿಸಿದ್ದ ಅನ್ನ ಪ್ರಸಾದ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಾವು ಸಹ ಕೆಲ ಕಾಲ ಭಕ್ತಾದಿಗಳಿಗೆ ಅನ್ನ ಪ್ರಸಾದವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ವಿಜಯ ಮಿರಾಶಿ, ವಿಕಾಸ ಬ್ಯಾಂಕ್ ಅಧ್ಯಕ್ಷರಾದ ಮುರಳಿ ಹೆಗಡೆ ಸೇರಿದಂತೆ ಸ್ಥಳೀಯ ಪ್ರಮುಖರು, ಗಜಾನನೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
.
.
.