


ಹುಬ್ಬಳ್ಳಿ ನಿವಾಸಿ, 41 ವರ್ಷದ ಲಾರಿ ಚಾಲಕ ಶಿವಾಜಿ ರಾಮಚಂದ್ರ ತಂಗಡಗಿ, ತನ್ನ ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಅತೀ ವೇಗ ಹಾಗೂ ನಿರ್ಲಕ್ಷದಿಂದ ಚಾಲನೆ ಮಾಡಿ, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದಾಗಿ, ಲಾರಿ ಸ್ವಲ್ಪ ಮುಂದೆ ಹೋಗಿ, ಅದೇ ದಾರಿಯಲ್ಲಿ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಡಿಕ್ಕಿ ಹೊಡೆದು ಹೆಚ್ಚಿನ ಹಾನಿಯನ್ನುಂಟುಮಾಡಿದ್ದಾನೆ.
ಗಾಯಾಳುಗಳನ್ನು ತಕ್ಷಣ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಅಪಘಾತದ ಸಂಬಂಧ ಪಿಎಸ್ಐ ಸಿದ್ದಪ್ಪ ಗುಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.